ಕಾಜಿಮೀರ್ಜ್ ವೀರ್ಜಿನ್ಸ್ಕಿ
[ಪೋಲಿಷ್, ಅನುವಾದ:ತೇಜಸ್ವಿನಿ ನಿರಂಜನ, ಜಿಡಿಸ್ಲಾ ರೆಷೆಲ್ಯೂಸ್ಕಿ]
ಯೂರೋಪು ಖಂಡದ ಆತ್ಮವೇ ನಡುಗಿದ ಕಾಲವದು
ಮೈಕೆಲೇಂಜೆಲೋ
ಗೋಲದ ಕೆಳಗೆ
ರೋಮಿನಲ್ಲಿ
ದೇವರ ಹತ್ತಿರ
ಗಾರೆಯವನ ತೊಟ್ಟಿಲಲ್ಲಿ ತೂಗುತ್ತ
ಆರಾಧನಾ ಮಂದಿರ, ಛತ್ತು, ಗೋಡೆಗಳ ಮೇಲೆ
ಚಿತ್ರ ಬಿಡಿಸಿದ
ಕೆಳಗೆ ಬಗ್ಗಿ
ಆತ ನೋಡಿದ
ಜಗಳಾಡುವ ಜನರನ್ನು
ಘೋರ ಯುದ್ಧಗಳನ್ನು:
ಮೇಲಿನಿಂದ ಗಟ್ಟಿಯಾಗಿ ಹೇಳಿದ:
"ಶಾಂತಿ! ಶಾಂತಿ!
ಇಲ್ದಿದ್ರೆ ನನ್ನ ಕುಂಚವನ್ನು ಕೆಳಕ್ಕೆಸೆದು
'ಜಗತ್ತಿನ ಸೃಷ್ಟಿ'ಯನ್ನು ನಿಲ್ಲಿಸೇನು!"
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
7 years ago
No comments:
Post a Comment